ವೀ.ವಿ.ಸಂಘ, ಬಳ್ಳಾರಿ
ಎ.ಡಿ.ಬಿ. ಪ್ರಥಮ ದರ್ಜೆ ಕಾಲೇಜು, ಹರಪನಹಳ್ಳಿ
“ಸಾಹಿತ್ಯ ಹಾಗೂ ಜೀವನ ಮೌಲ್ಯಗಳು” ವಿಷಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ – 29/01/2021
ದಿನಾಂಕ: 29/01/2021 ರಂದು ಐ.ಕ್ಯೂ.ಎ.ಸಿ. ಮತ್ತು ಕನ್ನಡ ಸಂಘದಡಿಯಲ್ಲಿ ಕನ್ನಡ ವಿಭಾಗದಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಪ್ರೋ. ಅಂಜಿನಪ್ಪ, ಸಹಾಯಕ ಪ್ರಾಧ್ಯಾಪಕರು, ಎ.ಆರ್.ಎಂ. ಕಾಲೇಜು, ದಾವಣಗೆರೆ, ಇವರು “ಸಾಹಿತ್ಯ ಹಾಗೂ ಜೀವನ ಮೌಲ್ಯಗಳು” ಎಂಬ ವಿಷಯ ಕುರಿತು ಮಾತನಾಡಿದರು. ಪ್ರಾಂಶುಪಾಲರು, ಬೋಧಕ & ಬೋಧಕೇತರ ಸಿಬ್ಬಂದಿ ಹಾಗೂ ಕನ್ನಡ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪುಷ್ಪ ಕೊಡುವ ಮೂಲಕ ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.