ವೀ.ವಿ.ಸಂಘ, ಬಳ್ಳಾರಿ
ಎ.ಡಿ.ಬಿ. ಪ್ರಥಮ ದರ್ಜೆ ಕಾಲೇಜು, ಹರಪನಹಳ್ಳಿ
“ಬಜೆಟ್ ಒಂದು ವಿಶ್ಲೇಷಣೆ 2020-21” ವಿಷಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ – 05/02/2021
ದಿನಾಂಕ: 05/02/2021 ರಂದು ಐ.ಕ್ಯೂ.ಎ.ಸಿ. ಮತ್ತು ಯೋಜನಾ ವೇದಿಕೆಯಡಿಯಲ್ಲಿ ಅರ್ಥಶಾಸ್ತ್ರ ವಿಭಾಗದಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಡಾ.ಕೆ.ಜಿ.ಶಂಕರಾನಂದ, ನಿವೃತ್ತ ಸಹ ಪ್ರಾಧ್ಯಾಪಕರು, ಇವರು “ಬಜೆಟ್ ಒಂದು ವಿಶ್ಲೇಷಣೆ 2020-21” ಎಂಬ ವಿಷಯ ಕುರಿತು ಮಾತನಾಡಿದರು. ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪುಷ್ಪ ಕೋಡುವ ಮೂಲಕ ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.