ವೀ.ವಿ.ಸಂಘ, ಬಳ್ಳಾರಿ
ಎ.ಡಿ.ಬಿ. ಪ್ರಥಮ ದರ್ಜೆ ಕಾಲೇಜು, ಹರಪನಹಳ್ಳಿ
ರಾಷ್ಟ್ರೀಯ ಮತದಾರರ ದಿನ 25-01-2022
ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಎಡಿಬಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ 1 ಮತ್ತು 2 ಘಟಕಗಳು, ಐ.ಕ್ಯೂ.ಎ ಸಿ. ಹಾಗೂ ಚುನಾವಣಾ ಸಾಕ್ಷಾರತ ಕ್ಲಬ್ ಸಹಯೊಗದೊಂದಿಗೆ 25 ಜನವರಿ 2022 ರಂದು ಬೆಳಿಗ್ಗೆ 11.00 ಗಂಟೆಗೆ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಿದೆವು. ಈ ಸಂದರ್ಭದಲ್ಲಿ ಮತದಾನದ ಹಕ್ಕುಗಳ ಕುರಿತು ಜಾಗೃತಿ ಕುರಿತು ವಿಚಾರ ಉಪನ್ಯಾಸ ಆಯೋಜಿಸಲಾಗಿತ್ತು. ಡಾ.ಎಸ್.ಎಂ.ಸಿದ್ಧಲಿಂಗಮೂರ್ತಿ. ಪ್ರಾಂಶುಪಾಲರು, ಎನ್ಎಸ್ಎಸ್ ಅಧಿಕಾರಿಗಳಾದ ಆನಂದ.ಎಸ್ ಮತ್ತು ಬಿ.ಶಿವಕುಮಾರ್ ಮತ್ತು ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಎನ್.ಎಸ್.ಎಸ್ ಅಧಿಕಾರಿ ಬಿ.ಶಿವಕುಮಾರ್ ರವರು ಸ್ವಾಗತಿಸಿದರು, ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಂಶುಪಾಲರು ವಿದ್ಯಾರ್ಥಿಗಳು ಹೊಸ ಮತದಾರರಾಗಿ ಸೇರ್ಪಡೆಗೊಳ್ಳಲು ವಿದ್ಯಾರ್ಥಿಗಳು ತಮ್ಮ ಮತದಾನದ ಶಕ್ತಿಯನ್ನು ಬಳಸಿಕೊಂಡು ಪ್ರಜಾಪ್ರಭುತ್ವವನ್ನು ಬಲಪಡಿಸುವಂತೆ ಒತ್ತಾಯಿಸಿದರು, ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯಶಾಸ್ತ್ರ ಉಪನ್ಯಾಸಕರಾದ
ಶ್ರೀ. ಶಫೀಉಲ್ಲಾ , ರಾಜ್ಯ ಶಾಸ್ತ್ರ ಉಪನ್ಯಾಸಕರು ,ಭಾರತೀಯ ಸಮಾಜದಲ್ಲಿ ನಡೆಯುತ್ತಿರುವ ಸಂಪೂರ್ಣ ಚುನಾವಣಾ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಉಪಸ್ಥಿತರಿರುವ ಎಲ್ಲಾ NSS ಸ್ವಯಂಸೇವಕರು ಮತ್ತು ವಿದ್ಯಾರ್ಥಿಗಳು. ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು
25 ಜನವರಿ 2022 ರಂದು ರಾಷ್ಟ್ರೀಯ ಮತದಾರರ ದಿನದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ‘ನವಭಾರತ ನಿರ್ಮಾಣದಲ್ಲಿ ಮತದಾರನ ಪಾತ್ರ’ ವಿಷಯ ಕುರಿತು ಪ್ರಬಂಧ ಬರೆಯುವ ಸ್ಪರ್ಧೆಯನ್ನು ನಡೆಸಲಾಯಿತು. ಪ್ರಥಮ ಸ್ಥಾನ ಪಡೆದ ಟೀಶಾ ಪಟೇಲ್ ಬಿ.ಕಾಂ (ಪ್ರಥಮ) ಮತ್ತು ನಂದೀನಿ ಎನ್, ಬಿ.ಎ..(ಪ್ರಥಮ), ದ್ವಿತೀಯ ಸ್ತಾನ ಪಡೆದ ಎನ್.ಚನ್ನವೀರಪ್ಪ ಮತ್ತು ತೃತೀಯ ಸ್ಥಾನ ಪಡೆದ ಕೆ. ಚಂದ್ರಿಕ ಬಿ.ಎಸ್ಚಿ(ಪ್ರಥಮ) ವರಿಗೆ - 26-01-22 ಗಣರಾಜ್ಯೋತ್ಸವ ದಿನದಂದು ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.