ವೀ.ವಿ.ಸಂಘ, ಬಳ್ಳಾರಿ
ಎ.ಡಿ.ಬಿ. ಪ್ರಥಮ ದರ್ಜೆ ಕಾಲೇಜು, ಹರಪನಹಳ್ಳಿ
ರಾಷ್ಟ್ರೀಯ ವಿಜ್ಞಾನ ದಿನ 28-02-2022
ದಿನಾಂಕ: 28-02-2022 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು, ವಿಜ್ಞಾನ ಸಂಘ ಹಾಗೂ ಐ.ಕ್ಯೂ.ಐ.ಸಿ. ಅಡಿಯಲ್ಲಿ ಆಚರಿಸಲಾಯಿತು. ರಾಮನ್ ಪರಿಣಾಮದ ಅವಿಷ್ಕಾರ ಗುರುತಿಸಲು ರಾಷ್ಟ್ರೀಯ ವಿಜ್ಞಾನ ದಿನದ ಕುರಿತು ಶ್ರೀಮತಿ ಹೆಚ್.ಆಶಾ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರು ಮಾತನಾಡಿದರು. ವಿಜ್ಞಾನದ ಅಂಶಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅದರಲ್ಲಿ ಆಸಕ್ತಿಯನ್ನು ಬೆಳಸಿಕೊಳ್ಳಲು ಯುವಕರನ್ನು ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ ಎಂದು ವಿವರಿಸಿದರು. ಶ್ರೀ ಜಿ.ಬಿ.ನಾಗನಗೌಡ, ಇಂಗ್ಲೀಷ್ ವಿಭಾಗದ ವಿಭಾಗದ ಮುಖ್ಯಸ್ಥರು, ರಾಷ್ಟ್ರೀಯ ವಿಜ್ಞಾನ ದಿನ-2022ರ ವಿಷಯವಾದ ‘ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಯೋಜಿತ ವಿಧಾನ’ ಎಂಬ ವಿಷಯ ಕುರಿತು ಮಾತನಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಡಾ. ಎಸ್.ಎಂ. ಸಿದ್ದಲಿಂಗ ಮೂರ್ತಿ, ಇವರು ವಹಿಸಿದ್ದರು. ಅವರು ಸಾಂಕ್ರಾಮಿಕ ಬಿಕ್ಕಟ್ಟಿನ ಸಮಯದಲ್ಲಿ ಮಾನವೀಯತೆಯ ಉಳಿವಿಗಾಗಿ ಕೆಲಸ ಮಾಡಬೇಕೆಂದು ಕರೆಕೊಟ್ಟರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗದ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.